ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತಕ್ಕೀಡಾಗಿದ್ದು, ಸೀಟ್ಬೆಲ್ಟ್ನಿಂದ ಜೀವ ಉಳಿದಿದೆ ಎಂದು ಹೇಳಿದ್ದಾರೆ.
ಮೈಸೂರಿನ ಕಡಕೋಳ ಬಳಿ ಕಾರು ಅಪಘಾತವಾಗಿದ್ದು, ಪ್ರಹ್ಲಾದ್ ಮೋದಿ, ಮಗ ಹಾಗೂ ಸೊಸೆಗೆ ಗಾಯವಾಗಿತ್ತು. ಬೆಂಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು.
ಕಾರಿನ ಬಲಭಾಗ ಸಂಪೂರ್ಣ ಹಾನಿಯಾಗಿದೆ, ಆದರೆ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ ಏಕೆಂದರೆ ನಾವು ಸೀಟ್ ಬೆಲ್ಟ್ ಧರಿಸಿದ್ದೆವು.ಇದು ನಮ್ಮ ಪ್ರಾಣ ಉಳಿಸಿದೆ. ಪ್ರಯಾಣಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಕರೆ ಮಾಡಿ ನನ್ನ ಆರೋಗ್ಯ ವಿಚಾರಿಸಿದ್ದಾರೆ. ಎಲ್ಲವೂ ಕ್ಷೇಮ ಎಂದು ಹೇಳಿದ್ದೇನೆ ಎಂದಿದ್ದಾರೆ.