ಹೊಸದಿಗಂತ ವರದಿ ವಿಜಯಪುರ:
ಜಿಲ್ಲೆಯ ಭೀಮಾತೀರದಲ್ಲಿ ರಕ್ತಸಿಕ್ತ ಚರಿತ್ರೆಯನ್ನು ಕೊನೆಗಾಣಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭೀಮಾತೀರದ ಮಲ್ಲಿಕಾರ್ಜುನ ಚಡಚಣ, ವಿಮಲಾಬಾಯಿಯನ್ನು ಆದಷ್ಟು ಬೇಗನೆ ಬಂಧನ ಮಾಡಲಾಗುವುದು ಎಂದರು. ಅಲ್ಲದೇ, ಇಂಡಿ, ಚಡಚಣ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜನರು ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ