ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪಹಲ್ಗಾಮ್ ದಾಳಿ ಬಳಿಕ ವಿಶ್ವವೇ ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದರ ಮದ್ಯೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಪಾಕಿಸ್ತಾನಕ್ಕೆ ತನ್ನ ಬೆಂಬಲವನ್ನು ನೀಡಿದ್ದಾನೆ.

ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಭಾರತಕ್ಕೆ ಇಲ್ಲ ಎಂದು ಹೇಳಿದ್ದಾನೆ.

ಭಾರತೀಯ ಸೇನೆ ಪಂಜಾಬ್ ಮೂಲಕ ಹಾದುಹೋಗಲು ಮತ್ತು ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತಕ್ಕೆ ಧೈರ್ಯವಿಲ್ಲ. ನಾವು, 20 ಮಿಲಿಯನ್ ಸಿಖ್ಖರು, ಪಾಕಿಸ್ತಾನದೊಂದಿಗೆ ಬಂಡೆಯಂತೆ ನಿಂತಿದ್ದೇವೆ. ಭಾರತದಲ್ಲಿ ಸಿಖ್ಖರು ಮತ್ತು ಇತರ ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ಈಗ ಕಾಲ ಬದಲಾಗಿದೆ, ಇದು 1965 ಅಥವಾ 1971 ಅಲ್ಲ, 2025 ಎಂದಿದ್ದಾನೆ.

ಪಾಕಿಸ್ತಾನ ಎಂದಿಗೂ ಅವರಾಗಿಯೇ ದಾಳಿ ಮಾಡಲು ಬರುವುದಿಲ್ಲ, ಯಾರೇ ದಾಳಿ ಮಾಡಿದರೂ ಅವರಿಗೆ ಕೆಟ್ಟ ಅಂತ್ಯವಿರುತ್ತದೆ. ಅದು ಇಂದಿರಾ ಗಾಂಧಿ, ನರೇಂದ್ರ ಮೋದಿ ಅಥವಾ ಅಮಿತ್ ಶಾ ಆಗಿರಬಹುದು. ರಾಜಕೀಯ ಲಾಭಕ್ಕಾಗಿ ಭಾರತವು ಪಹಲ್ಗಾಮ್‌ನಲ್ಲಿ ಹಿಂದುಗಳನ್ನು ಕೊಂದಿದೆ ಎಂದು ಪನ್ನು ನಾಲಿಗೆ ಹರಿಬಿಟ್ಟಿದ್ದಾನೆ.

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!