ನಾವು ಯಾರಿಗೂ ಅನ್ಯಾಯ ಮಾಡುವುದಿಲ್ಲ, ಜೈಲಿಗೆ ಹಾಕುವುದಿಲ್ಲ: ಇಮ್ರಾನ್​ ಖಾನ್​ಗೆ ಸಂದೇಶ ರವಾನಿಸಿದ ಪ್ರಧಾನಿ ಆಕಾಂಕ್ಷಿ ಶೆಹಬಾಜ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಕಿಸ್ತಾನದ ಪ್ರಧಾನಿ ಹುದ್ದೆಯಿಂದ ಇಮ್ರಾನ್​ ಖಾನ್​ ಪದಚ್ಯುತಿಗೊಂಡ ಬೆನ್ನಲ್ಲೇ ಹೊಸ ಸರ್ಕಾರ ರಚನೆಯ ಸರ್ಕಸ್ ಶುರುವಾಗಿದ್ದು, ವಿರೋಧ ಪಕ್ಷದ ನಾಯಕ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಮುಖ್ಯಸ್ಥ ಶೆಹಬಾಜ್ ಷರೀಫ್ ಮುಂದಿನ ಪ್ರಧಾನಿ ಹುದ್ದೆಗೇರಲು ಸಿದ್ಧತೆ ನಡೆಸುತ್ತಿದ್ದಾರೆ.
ಈ ಸಂದರ್ಭ ಇಮ್ರಾನ್​ ಖಾನ್​ಗೆ ಸಂದೇಶ ರವಾನಿಸಿದ್ದ ಶೆಹಬಾಜ್ ಷರೀಫ್, ಅ, ‘ಕಳೆದ ರಾತ್ರಿ ರಾಷ್ಟ್ರ ಮತ್ತು ಸಂಸತ್ತಿನ ಭವನವನ್ನು ಗಂಭೀರ ಬಿಕ್ಕಟ್ಟಿನಿಂದ ಮುಕ್ತಗೊಳಿಸಲಾಗಿದೆ. ಪಾಕಿಸ್ತಾನಕ್ಕೆ ಹೊಸ ಉದಯದ ಅಭಿನಂದನೆಗಳು’ ಎಂದು ಹೇಳಿದ್ದಾರೆ.
‘ನಾವು ಯಾರ ಮೇಲೂ ಸೇಡು ತೀರಿಸಿಕೊಳ್ಳುವುದಿಲ್ಲ. ನಾವು ಯಾರಿಗೂ ಅನ್ಯಾಯ ಮಾಡುವುದಿಲ್ಲ ಮತ್ತು ನಾವು ಯಾರನ್ನೂ ಜೈಲಿಗೆ ಹಾಕುವುದಿಲ್ಲ. ಕಾನೂನು ತನ್ನದೇ ಆದ ಮಾರ್ಗದಲ್ಲಿ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ಶೆಹಬಾಜ್ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!