ಯಾವುದೇ ಕಾರಣಕ್ಕೂ ನಮ್ಮ ಜನರನ್ನು ಒಕ್ಕಲೆಬ್ಬಿಸಲು ನಾವು ಬಿಡುವುದಿಲ್ಲ: ಸಂಸದ ರಾಘವೇಂದ್ರ

ಹೊಸದಿಗಂತ ವರದಿ, ಶಿವಮೊಗ್ಗ:

ಅರಣ್ಯ ಹಕ್ಕು ಪತ್ರ ಕೊಡಿಸುವ ಪ್ರಯತ್ನದಲ್ಲಿದ್ದೇನೆ. ಯಾವುದೇ ಕಾರಣಕ್ಕೂ ನಮ್ಮ ಜನರನ್ನು ಒಕ್ಕಲೆಬ್ಬಿಸಲು ನಾವು ಬಿಡುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ಭಾಗ್ಯೋದಯ ಮಹಿಳಾ ಸಹಕಾರ ಸಂಘದ ಸಮುದಾಯ ಭವನವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಅಂಜನಾಪುರ ಜಲಾಶಯ ಒಡೆದ ಸಂದರ್ಭದಲ್ಲಿ ಯಡಿಯೂರಪ್ಪ ತಮ್ಮ ಸ್ವಂತ ಕಾರಿಗೆ ಮೈಕ್‌ಸೆಟ್ ಕಟ್ಟಿ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳಲು ಸೂಚಿಸಿದ್ದರು. ಇಂದು 30 ಕೋಟಿ ವೆಚ್ಚದಲ್ಲಿ ಒಂದೂವರೆ ವರ್ಷದಲ್ಲಿ ನೀರನ್ನು ಹರಿಸುವ ಕೆಲಸ ಮುಗಿದಿದೆ. ದೇವರು ಮೆಚ್ಚುವಂತ ಕೆಲಸವನ್ನು ನಾವು ಮಾಡಿದ್ದೇವೆ. ನಿಮ್ಮ ಧ್ವನಿಯಾಗಿ ಸಂಸತ್‌ನಲ್ಲಿ ಮಾತನಾಡಿದ್ದೇನೆ. ನಾವು ಕೆಲಸ ಮಾಡಿ ಮಾತಾಡುವಂತಹ ಜನ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!