ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಜೆಡಿಎಸ್ ಸ್ಥಾನವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಜೆಡಿಎಸ್ ಎಲ್ಲಿದೆ ಎಂಬುದನ್ನು ತೋರಿಸುವ ಶಕ್ತಿ ಜೆಡಿಎಸ್-ಬಿಜೆಪಿಗೆ ಇದೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ಅವರ ಮಾತಿಗೆ ತಕ್ಕ ಉತ್ತರ ನೀಡುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.
ನಗರದ ಶ್ರೀ ಚನಬಸವೇಶ್ವರ ಸಭಾಭವನದ ಬಳಿ ಗುರುವಾರ ನಡೆದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಾದಾ ಜೆಡಿಎಸ್ ಬಗ್ಗೆ ಮಾತನಾಡಬೇಡಿ. ಬಿಜೆಪಿ 18 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ. ಆದರೆ ನಾಲ್ಕು ರಾಜ್ಯಗಳನ್ನು ಬಿಟ್ಟು ಉಳಿದೆಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಎಲ್ಲಿದೆ ಹೇಳಿ.
ಕಾಂಗ್ರೆಸ್ ಸುರಕ್ಷಿತವಾಗಿದ್ದರೆ, ರಾಹುಲ್ ಗಾಂಧಿ ಕೇರಳಕ್ಕೆ ಏಕೆ ಪ್ರಯಾಣ ಮಾಡುತ್ತಿದ್ದಾರೆ? ಸೋನಿಯಾ ಗಾಂಧಿ ರಾಜ್ಯಸಭೆಗೆ ಹೋಗಿದ್ದು ಯಾಕೆ? ‘ಕೇಂದ್ರ ಸರಕಾರ ಸಬ್ಸಿಡಿ ನೀಡುತ್ತಿಲ್ಲ, ತೆರಿಗೆ ಹಂಚಿಕೆಯಲ್ಲಿ ಅಸಮಾನತೆಗಳಿವೆ ಮತ್ತು ನ್ಯಾಯಾಲಯದಲ್ಲಿ ಕಾನೂನು ಕ್ರಮ ಜರುಗಿಸುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗಳು ಬಾಲಿಶವಾಗಿದ್ದು, ಸರಕಾರದ ಕೊಡುಗೆಯನ್ನು ವ್ಯವಸ್ಥಿತವಾಗಿ ಕಡೆಗಣಿಸುವ ಅಸಹಾಯಕತೆಯ ಭಾವವನ್ನು ಬಿಂಬಿಸುತ್ತದೆ. ಇದು ಪ್ರಜ್ಞಾಹೀನ ಮಾತು ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.