ವಾತಾವರಣ ವೈಪರೀತ್ಯ: ರಸ್ತೆ ಮಾರ್ಗವಾಗಿ ಆಗಮಿಸುತ್ತಿರುವ ಸಿಎಂ

ಹೊಸದಿಗಂತ ವರದಿ ಕುಷ್ಟಗಿ:

ಜನಸಂಕಲ್ಪ ಯಾತ್ರೆ ಆರಂಭಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಕುಷ್ಟಗಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಬೇಕಿತ್ತು. ವಾತಾವರಣ ವೈಪರೀತ್ಯದಿಂದ ವಿಜಯನಗರದಿಂದ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದಾರೆ.

ವಿಜಯನಗರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಷ್ಟಗಿ ಗೆ ಆಗಮಿಸುತ್ತಿದ್ದು, ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿತ್ತು. ಆದರೆ, ವಾತಾವರಣ ವೈಪರೀತ್ಯದಿಂದ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದಾರೆ. ಹೆಲಿಪ್ಯಾಡ್ ಬಳಿ ನೆರದಿದ್ದ ಸಾರ್ವಜನಿಕರ ಅಹವಾಲು ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಸ್ವೀಕರಿಸಿದರು. ಸಂಜೆ 4.30 ಕ್ಕೆ ಸಿಎಂ ಕುಷ್ಟಗಿ ಗೆ ಆಗಮಿಸುವ ಸಾಧ್ಯತೆ ಇದೆ.

ಕಾರ್ಯಕ್ರಮ ಹಿನ್ನೆಲೆ ಎಸ್ಪಿ ಅರುಣಾಂಗ್ಶು ಗಿರಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ. ಜಿಲ್ಲಾಧಿಕಾರಿ ಸುಂದರೇಶ ಬಾಬು, ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್, ಉಪವಿಭಾಗಾಧಿಕಾರಿ ಬಸಣ್ಣಪ್ಪ ಬೀಡುಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!