Friday, January 23, 2026
Friday, January 23, 2026
spot_img

WEATHER | ನಡುಗಿಸುವ ಚಳಿ, ಕಾಡುವ ಒಣಹವೆ: ಹವಾಮಾನ ಇಲಾಖೆಯಿಂದ ಲೇಟೆಸ್ಟ್ ಅಪ್ಡೇಟ್

ರಾಜ್ಯದ ಹವಾಮಾನದಲ್ಲಿ ಕಳೆದ ಕೆಲವು ದಿನಗಳಿಂದ ಏರುಪೇರು ಕಂಡುಬರುತ್ತಿದೆ. ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದ್ದರೆ, ಇನ್ನುಳಿದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ.

ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಶುಷ್ಕ ವಾತಾವರಣವಿರಲಿದೆ.

ಬೆಳಗಾವಿ, ಧಾರವಾಡ, ಕಲಬುರಗಿ, ಬೀದರ್ ಸೇರಿದಂತೆ ಈ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಕಾಡುತ್ತಿರುವ ಒಣಹವೆ ಇಂದೂ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 28°C ಹಾಗೂ ಕನಿಷ್ಠ ತಾಪಮಾನ 16°C ದಾಖಲಾಗುವ ಸಾಧ್ಯತೆಯಿದೆ. ಮುಂಜಾನೆ ದಟ್ಟವಾಗಿ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ.

Must Read