ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ ಮುಂದಿನ 5 ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿಯ ಪ್ರಮಾಣ ಹೆಚ್ಚಿರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಮುಂದುವರೆಯಲಿದೆ.