ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಮುಂಜಾನೆ ಸ್ವಲ್ಪ ಚಳಿ ಎನಿಸಿದರೆ, ಬಿಸಿಲು ಜಾಸ್ತಿಯಾಗುತ್ತದೆ. ಬಿಸಿಲಿನ ತಾಪಕ್ಕೆ ಜನ ಕಂಗಾಲಾಗುತ್ತಿದ್ದಾರೆ. ಇದರಿಂದ ಜನರು ತಂಪು ಪಾನೀಯಗಳತ್ತ ಮುಖ ಮಾಡುತ್ತಿದ್ದಾರೆ.
ಬೆಂಗಳೂರು ಸೇರಿದಂತೆ ಕೆಲವು ಪ್ರದೇಶಗಳು ನೀರಿನ ಕೊರತೆಯನ್ನು ಅನುಭವಿಸುತ್ತಿವೆ. ಈಗಾಗಲೇ ಕೆಲವೆಡೆ ತಾಪಮಾನ ಏರಿಕೆಯಾಗಿದ್ದು, ರಾಜ್ಯದಲ್ಲಿ ಇನ್ನೂ ಒಂದು ವಾರ ಬಿಸಿಲಿನ ಝಳ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.