ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಾದ್ಯಂತ ಒಣ ಹವಾಮಾನ ಇರಲಿದ್ದು. ಕೊಡಗು ಮತ್ತು ಉತ್ತರ ಒಳನಾಡಿನ ಬೆಳಗಾವಿಯ ಗುಡ್ಡಗಾಡು ಪ್ರದೇಶಗಳಲ್ಲೂ ಲಘು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಕರಾವಳಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಉತ್ತರ ಒಳ ಜಿಲ್ಲೆಗಳಲ್ಲಿ ಹಾವೇರಿ ಸೇರಿದಂತೆ ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ವಿಜಯಪುರ, ಬಾಗಲಕೋಟೆ, ಜಿಲ್ಲೆಗಳಲ್ಲಿ ಬರಗಾಲ ಎದುರಾಗಲಿದೆ.
ಮುಂದಿನ ಮೂರು ದಿನಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳದ ಸ್ಥಳಗಳಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ, ದಕ್ಷಿಣ ಕರ್ನಾಟಕದ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಇದರ ಜೊತೆಗೆ, ದೇಶದ ಉತ್ತರ ಒಳಭಾಗದ ಕೆಲವು ಸ್ಥಳಗಳಲ್ಲಿ, ಗರಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು.