WEATHER | ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಕರ್ನಾಟಕದ ಉತ್ತರ ಒಳಭಾಗ, ದಕ್ಷಿಣ ಒಳಭಾಗ, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಗುಡ್ಡಗಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರು ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!