Saturday, September 27, 2025

WEATHER | ಇಂದಿನಿಂದ ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆ, ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಾದ್ಯಂತ ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.