ಕರ್ನಾಟಕದ ಕರಾವಳಿಯಲ್ಲಿ ಮೇ 25ರಿಂದ ಮಳೆ ಮತ್ತಷ್ಟು ಜೋರಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಮುಂಗಾರು ಅಬ್ಬರ ಶುರುವಾಗುವ ಸಾಧ್ಯತೆ ಇದೆ.
ಈಗಾಗಲೇ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇಂದು ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಕೂಡ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಾರವಾರ, ಹೊನ್ನಾವರ, ಉಡುಪಿ, ಪುತ್ತೂರು, ಯಲ್ಲಾಪುರ, ಮಾಣಿ, ಹುಬ್ಬಳ್ಳಿ, ಬಾದಾಮಿ, ಬೀದರ್, ಕಲಘಟಗಿ, ಮುದ್ದೇಬಿಹಾಳ, ಕುಷ್ಟಗಿ, ದಾವಣಗೆರೆಯಲ್ಲಿ ಮಳೆಯಾಗಿದೆ.