Tuesday, January 27, 2026
Tuesday, January 27, 2026
spot_img

WEATHER | ಕರಾವಳಿ-ಮಲೆನಾಡಲ್ಲಿ ಮಳೆ ಅಬ್ಬರ: ಬೆಂಗಳೂರಿನಲ್ಲಿ ‘ಕೂಲ್’ ವಾತಾವರಣ!

ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಸುಳಿ ಗಾಳಿಯ ಪರಿಣಾಮವಾಗಿ ಕರ್ನಾಟಕದ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದೆ. ರಾಜ್ಯಾದ್ಯಂತ ಚಳಿಯ ತೀವ್ರತೆ ತಗ್ಗಿದ್ದು, ಹಲವೆಡೆ ಮೋಡಕವಿದ ವಾತಾವರಣದೊಂದಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಚಂಡಮಾರುತದ ಪ್ರಭಾವದಿಂದಾಗಿ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ: ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದ ಕೆಲವು ಭಾಗಗಳು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಹಲವೆಡೆ ಮಳೆ ಹನಿಯಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯ ನಿರೀಕ್ಷೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 27°C ಹಾಗೂ ಕನಿಷ್ಠ ತಾಪಮಾನ 19°C ದಾಖಲಾಗುವ ಸಾಧ್ಯತೆಯಿದೆ. ಇನ್ನು ಪಕ್ಕದ ಚಿಕ್ಕಬಳ್ಳಾಪುರದಲ್ಲಿ ಕನಿಷ್ಠ ತಾಪಮಾನ 17°C ವರೆಗೆ ಇಳಿಕೆಯಾಗಲಿದ್ದು, ಚಳಿ ಮತ್ತು ಮೋಡದ ಆಟ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !