WEATHER | ಸುಡುವ ಬಿಸಿಲಿನಲ್ಲೂ ಮಳೆಯಾಗುವ ಮುನ್ಸೂಚನೆ

ಗುಡ್ಡಗಾಡು ಪ್ರದೇಶಗಳು ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆಯ ಅನುಭವವಾಗಲಿದೆ.

ದಕ್ಷಿಣದ ಚಾಮರಾಜನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಇತರ ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಗುಡ್ಡಗಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆಯ ನಿರೀಕ್ಷೆಯಿದ್ದು, ಶಿವಮೊಗ್ಗದಲ್ಲಿ ಅನಾವೃಷ್ಟಿ ಮುಂದುವರಿದಿದೆ. ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಒಣ ಹವಾಮಾನ ಇರುತ್ತದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಲಿದೆ. ಗರಿಷ್ಠ ತಾಪಮಾನವು 39 ಡಿಗ್ರಿ ಮೀರುತ್ತದೆ. ಈ ಕಾರಣದಿಂದಲೇ ಬಿಸಿಲಿನ ಝಳವು ಜನರನ್ನು ಕೆರಳಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!