WEATHER REPORT | ಇಂದು ರಾಜ್ಯದಲ್ಲಿ ಶುಷ್ಕ ವಾತಾವರಣ: ಎಲ್ಲೆಲ್ಲಿ ಮಳೆ?

ಹೊಸದಿಂಗತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬಹುತೇಕ ಶುಷ್ಕ ಹವಾಮಾನವನ್ನು ಅನುಭವಿಸುವ ನಿರೀಕ್ಷೆಯಿದೆ. ವಿಜಯಪುರದಲ್ಲಿ ಚಳಿಯ ವಾತಾವರಣವಿದ್ದರೆ ಕರಾವಳಿ, ಗುಡ್ಡಗಾಡು ಪ್ರದೇಶಗಳಲ್ಲದೆ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲೂ ಒಣಹವೆ ಇರುತ್ತದೆ.

ಬೆಂಗಳೂರಿನಲ್ಲಿ ಮುಂಜಾನೆ ದಟ್ಟವಾದ ಮಂಜು ಕವಿದಿದ್ದು, ಚಳಿಯ ವಾತಾವರಣ ಸೇರಿಕೊಂಡು ಜನರು ತುಂಬಾ ಚಳಿಯನ್ನು ಅನುಭವಿಸುತ್ತಿದ್ದಾರೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮಳೆ ಮತ್ತು ಒಣಹವೆ ಇರುವುದಿಲ್ಲ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಮಂಡ್ಯ, ತುಮಕೂರು ಮತ್ತು ವಿಜಯನಗರ ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಒಣ ಹವೆ ನಿರೀಕ್ಷಿಸಲಾಗಿದೆ. ಕರಾವಳಿ ಪ್ರದೇಶಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮುಂತಾದ ಗುಡ್ಡಗಾಡು ಪ್ರದೇಶಗಳಲ್ಲೂ ಒಣಹವೆ ಇರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!