WEATHER | ರಾಜ್ಯಾದ್ಯಂತ ಬಿಸಿಲು, ಚಳಿ ವಾತಾವರಣ ಇರಲಿದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾನುವಾರವೂ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ. ಕರ್ನಾಟಕ ಹವಾಮಾನ ಮುನ್ಸೂಚನೆ ನೀಡಿದೆ, ಹಗಲು ರಾತ್ರಿ ಚಳಿಯ ವಾತಾವರಣ ಇರಲಿದೆ. ಮಧ್ಯಾಹ್ನ ಬಿಸಿಲು ಇರುತ್ತದೆ.

ರಾಜಧಾನಿ ಬೆಂಗಳೂರಿನ ಕೆಲವೆಡೆ ಬೆಳಗ್ಗೆ ಮಂಜು ಕವಿದಿದೆ. ಸಂಜೆ ತಂಪಾದ ಗಾಳಿ ಬೀಸುತ್ತದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್.

ಚಾಮರಾಜನಗರ, ಮೈಸೂರು, ಮಂಡ್ಯ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಒಣಹವೆ ಇರುತ್ತದೆ. ಉತ್ತರ ಭಾಗದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!