ಬಿಜೆಪಿ ಕಾರ್ಯಕಾರಿಣಿಗೆ ಆಗಮಿಸಿದ ಜೆ.ಪಿ.ನಡ್ಡಾ ಅವರಿಗೆ ಆತ್ಮೀಯ ಸ್ವಾಗತ

ಹೊಸದಿಗಂತ ವರದಿ, ವಿಜಯನಗರ
ವಿಜಯನಗರ ಸಾಮ್ರಾಜ್ಯದ ಪುಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭಾನುವಾರ ಸಿ.ಎಂ.ಬಸವರಾಜ್ ಬೊಮ್ಮಾಯಿ ಅವರು ಸೇರಿದಂತೆ ಪಕ್ಷದ ಅನೇಕ ಗಣ್ಯರು ಅತ್ಯಂತ ಸಂಭ್ರಮದಿಂದ ಸ್ವಾಗತಿಸಿದರು.
ಸಭೆಯ ಮುಖ್ಯ ವೇದಿಕೆ ಮುಂಭಾಗದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜೀ ಅವರು ಹೂಗುಚ್ಛ ನೀಡುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಜೀ ಅವರನ್ನು ಸ್ವಾಗತಿಸಿದರು.
ಈ ವೇಳೆ ಡೊಳ್ಳು ಕುಣಿತ, ನಂದಿ ಕೋಲು, ತಮಟೆ, ಸಮಾಳ, ಮೊದಲಾದ ಜನಪದ ವಾಧ್ಯಗಳ ವಾದನದೊಂದಿಗೆ ನಡ್ಡಾಜೀ ಅವರನ್ನು ಗಣ್ಯರು ಅದ್ದೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿ.ಎಂ.ಜಗಧೀಶ್ ಶೆಟ್ಟರ್, ಸಚಿವರಾದ ಆನಂದ್ ಸಿಂಗ್, ಶಶಿಕಲಾ‌ ಜೊಲ್ಲೆ, ಆರ್.ಅಶೋಕ್, ಡಿ.ಸುಧಾಕರ್, ಬಿ.ಶ್ರೀರಾಮುಲು, ರಾಜ್ಯ ಸಹ ಉಸ್ತುವಾರಿ ಕೆ.ಅರುಣಾ, ಕೇಂದ್ರ ಸಚಿವ ಪ್ರಭು ಚೌವ್ಹಾಣ್, ಮಾಜಿ ಸಿ.ಎಂ.ಲಕ್ಷ್ಮಣ್ ಸವದಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ಸಂಸದ ವೈ.ದೇವೇಂದ್ರಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!