ರಶ್ಮಿಕಾ ಮಂದಣ್ಣ ಬ್ಯಾನ್ ಕುರಿತು ನಟ ಶಿವರಾಜ್‌ಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಕರ್ನಾಟಕದಲ್ಲಿ ಬ್ಯಾನ್ ಮಾಡಲೇಬೇಕು ಅಂತಾ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಪಟ್ಟು ಹಿಡಿದಿದ್ದರು. ಇದೀಗ ಈ ಬಗ್ಗೆ ನಟ ಶಿವರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ರಶ್ಮಿಕಾ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚ್ತಿದ್ದಾರೆ. ತಾವು ಹತ್ತಿದ ಏಣಿಯನ್ನೇ ನಟಿ ಮರೆತಿದ್ದಾರೆ ಎಂದು ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಕುರಿತು ಶಿವಣ್ಣ ಕೂಡ ರಿಯಾಕ್ಟ್ ಮಾಡಿದ್ದು, ನನಗೆ ಈ ಬಗ್ಗೆ ಗೊತ್ತಿಲ್ಲ. ಅವರ ಸಿನಿಮಾ ಚೆನ್ನಾಗಿ ಹೋಗುತ್ತೀದೆಯಾ? ಅದನ್ನ ಅಷ್ಟೇ ನೋಡುತ್ತೇನೆ. ಕಾಂಟ್ರವರ್ಸಿಗಳ ಕಡೆ ನಾನು ಗಮನ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!