ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಕರ್ನಾಟಕದಲ್ಲಿ ಬ್ಯಾನ್ ಮಾಡಲೇಬೇಕು ಅಂತಾ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಪಟ್ಟು ಹಿಡಿದಿದ್ದರು. ಇದೀಗ ಈ ಬಗ್ಗೆ ನಟ ಶಿವರಾಜ್ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ರಶ್ಮಿಕಾ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚ್ತಿದ್ದಾರೆ. ತಾವು ಹತ್ತಿದ ಏಣಿಯನ್ನೇ ನಟಿ ಮರೆತಿದ್ದಾರೆ ಎಂದು ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಈ ಕುರಿತು ಶಿವಣ್ಣ ಕೂಡ ರಿಯಾಕ್ಟ್ ಮಾಡಿದ್ದು, ನನಗೆ ಈ ಬಗ್ಗೆ ಗೊತ್ತಿಲ್ಲ. ಅವರ ಸಿನಿಮಾ ಚೆನ್ನಾಗಿ ಹೋಗುತ್ತೀದೆಯಾ? ಅದನ್ನ ಅಷ್ಟೇ ನೋಡುತ್ತೇನೆ. ಕಾಂಟ್ರವರ್ಸಿಗಳ ಕಡೆ ನಾನು ಗಮನ ಕೊಡುವುದಿಲ್ಲ ಎಂದು ಹೇಳಿದ್ದಾರೆ.