ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಮೂರ್ಖ, ಪುಂಡ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಟೀಕೆಗೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ವಿದ್ಯಾರ್ಥಿಗಳಾಗಿದ್ದಾಗ, ನಾವು ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ವಿರುದ್ಧ ಗೂಂಡಾಗಿರಿ ಆರೋಪವನ್ನೂ ದಾಖಲಿಸಿದ್ದರು. ಹಾಗಾದರೆ, ನಾನು ಗೂಂಡಾನಾ? ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
ಯತೀಂದ್ರ ಅವರು ತಮ್ಮ ತಂದೆಯ ಹೆಸರಿನಲ್ಲಿ ಅಧಿಕಾರ ಹೊಂದಿದ್ದಾರೆ. ಇಂಥವರಿಗೆ ಬಡವರ ಕಷ್ಟ ಅರಿವಾಗುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ಕಿಡಿಕಾರಿದ್ದಾರೆ.