ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸದುರ್ಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ. ಪತಿ ಮತ್ತು ಕುಟುಂಬಸ್ಥರ ವಿರುದ್ಧ ಮೃತಳ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ.
ಗೀತಶ್ರೀ ಮೃತ ರ್ದುದೈವಿ. ಆಕೆ ಹೊಸದುರ್ಗದ ಗೊರವನಕಲ್ಲು ಗ್ರಾಮದ ಪ್ರಭುಕುಮಾರ್ ಜೊತೆ ಐದಾರು ವರ್ಷದ ಹಿಂದೆ ಮದುವೆ ಆಗಿದ್ದರು. ಪ್ರಭುಕುಮಾರ್ ಸರ್ಕಾರಿ ನೌಕರಿ ಗಿಟ್ಟಿಸಲು ಓದುತ್ತಿದ್ದ. ಜೊತೆಗೆ ಖಾಸಗಿ ಬ್ಯಾಂಕ್ನಲ್ಲಿ ಉದ್ಯೋಗ ಮಾಡುತ್ತಿದ್ದ.
ಪತ್ನಿ ಗೀತಶ್ರೀ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು, ಇವರಿಗೆ ಮಗಳಿದ್ದಾರೆ, ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದ ದಂಪತಿ ಜೀವನದಲ್ಲಿ ಬಿರುಗಾಳಿ ಬೀಸಿದೆ. ಪ್ರಭು ಯಾವ್ಯಾವುದೋ ಫ್ರಸ್ಟ್ರೇಷನ್ನಲ್ಲಿ ಗೀತಾಳಿಗೆ ತೊಂದರೆ ಕೊಡುತ್ತಿದ್ದ. ಹಣ ಬೇಕೆಂದು ಪೀಡಿಸುತ್ತಿದ್ದ. ಇದಾದ ಕೆಲ ದಿನಗಳಲ್ಲೇ ಗೀತಶ್ರೀ ಮೃತದೇಹ ಬೆಡ್ರೂಮ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.
ಮತ್ತೆ ವರದಕ್ಷಿಣೆ ಕಿರುಕುಳ ನೀಡಿ ಪತಿ ಪ್ರಭುಕುಮಾರ್ ಮತ್ತು ಕುಟುಂಬಸ್ಥರು ಗೀತಶ್ರೀಗೆ ಹೊಡೆದು ಹತ್ಯೆ ಮಾಡಿದ್ದಾರೆ. ಬಳಿಕ ನೇಣು ಬಿಗಿದು ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ ನಡೆದಿದೆ ಎಂದು ಮೃತಳ ಸಹೋದರ ನಿರಂಜನ್ ಆರೋಪಿಸಿದ್ದಾರೆ. ಈ ಕುರಿತು ಪ್ರಭುಕುಮಾರ್ ವಿರುದ್ಧ ಮೃತಳ ಪೋಷಕರು ಕೊಲೆ ಆರೋಪ ಪ್ರಕರಣ ದಾಖಲಿಸುತ್ತಿದ್ದಂತೆ ಆರೋಪಿ ನಾಪತ್ತೆ ಆಗಿದ್ದಾನೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.