ವಧುವಂತೆ ಸಿಂಗರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ, ಏನಾಯ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಧ್ಯಪ್ರದೇಶದಲ್ಲಿ ಯುವಕನೊಬ್ಬ ವಧುವಂತೆ ಸಿಂಗರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಯುವಕ ಪುನೀತ್ ದುಬೆ  ಇಂದೋರ್‌ನ ಹಾಸ್ಟೆಲ್ ಕೊಠಡಿಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾನೆ.

ಯುವಕ ಕೈಗಳಿಗೆ ಹಸಿರು ಬಳೆಗಳನ್ನು ತೊಟ್ಟು, ಮದುವನಗಿತ್ತಿಯಂತೆ ಸಿಂಗಾರಗೊಂಡು ಹಾಸ್ಟೆಲ್​​ನ ತನ್ನ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾನೆ. ಯುವಕನ ಮೃತದೇಹ ಕಂಡ ಪೋಷಕರು ಇದು ಕೊಲೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ. ನೇಣು ಬಿಗಿದುಕೊಂಡ ಜಾಗದಲ್ಲಿ ರಕ್ತದ ಕಲೆಗಳಿದ್ದು ಇದು ಕೊಲೆಯೋ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!