ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಸ್ಫೋಟದ ಕುರಿತು ವಿದೇಶಾಂಗ ವ್ಯವಹಾರಗಳ ಮತ್ತು ಸಂಸದೀಯ ವ್ಯವಹಾರಗಳ ಸಚಿವ ವಿ.ಮುರಳೀಧರನ್ ಪ್ರತಿಕ್ರಿಯಿಸಿದ್ದು, “ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟದ ಘಟನೆ ಆಘಾತಕಾರಿ ಘಟನೆಯಾಗಿದೆ. ಕೇರಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನಿಜಕ್ಕೂ ಆತಂಕಕಾರಿಯಾಗಿದೆ ಎಂದರು.
ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾದ ಇಂತಹ ಘಟನೆಗಳು ನಡೆಯುತ್ತಿವೆ. ಈಗಾಗಲೇ ಗೃಹ ಸಚಿವರು ಕೇರಳದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ. ನಾನು ಸಹ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಬೇಕಿದೆ. ಕ್ರಮ ಕೈಗೊಳ್ಳುತ್ತೇವೆ ಎಂದರು.