ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಸದ್ಯದಲ್ಲೇ ಹತ್ತಿರ ಬರುತ್ತಿದೆ. ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿಯಲ್ಲಿ ನಿರತರಾಗಿದ್ದಾರೆ. ಹೀಗಿರುವಾಗ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಅಭಿಮಾನಿಯೊಬ್ಬರು ಹರಕೆ ಹೊತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣಾ ಗ್ರಾಮದಲ್ಲಿ ರಥೋತ್ಸವದ ವೇಳೆ ಈ ದೃಶ್ಯ ಕಂಡು ಬಂದಿದೆ. ಗ್ರಾಮದ ಮುರುಡಬಸವೇಶ್ವರ ದೇವರ ರಥೋತ್ಸವದ ವೇಳೆ ಮೋದಿ ಅಭಿಮಾನಿಯೊಬ್ಬರು ಹರಕೆ ಕಟ್ಟಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಆಶಿಸಿದ್ದಾರೆ.
ಅಭಿಮಾನಿಯೊಬ್ಬ ಬಾಳೆ ಹಣ್ಣಿನ ಮೇಲೆ ಮೋದಿ ಹೆಸರನ್ನು ಬರೆದು ರಥಕ್ಕೆ ಹರಕೆ ಕಟ್ಟಿಕೊಂಡಿದ್ದಾರೆ. ಜೊತೆಗೆ ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಸವರಾಜ್ ಜಯಗಳಿಸಲಿ ಎಂದು ಬರೆದು ರಥಕ್ಕೆ ಎಸೆದಿದ್ದಾರೆ.