ಕುಂಕುಮ ಇಟ್ಟುಕೊಳ್ಳಲು ನಮ್ಮ ಸಿಎಂ ಸಿದ್ದರಾಮಯ್ಯನವರಿಗೆ ಏನಪ್ಪಾ ಪ್ರಾಬ್ಲಮ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಕುಂಕುಮ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಜನಕಲ್ಯಾಣ ಸಮಾವೇಶದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಯ್ಸಳ ರೆಸಾರ್ಟ್‌ಗೆ ಆಗಮಿಸಿದ್ದರು.‌

ಈ ವೇಳೆ, ರೆಸಾರ್ಟ್ ಸಿಬ್ಬಂದಿಗಳು ಸಿದ್ದರಾಮಯ್ಯನವರಿಗೆ ಸ್ವಾಗತ ಕೋರುವ ವೇಳೆ ಕುಂಕುಮ ಇಡಲು ಮುಂದಾದರು. ಈ ವೇಳೆ ಸಿದ್ದರಾಮಯ್ಯ ಬೇಡ ಎಂದು ನಿರಾಕರಿಸಿದ್ದಾರೆ.

ಈ ವೇಳೆ ಸಚಿವ ಕೆ.ರಾಜಣ್ಣ, ತಿಲಕ ಅಷ್ಟೇ ಸರ್ ಎಂದು ಹೇಳಿದರು ಕೂಡ ಸಿಎಂ ಬೇಡ ಎಂದು ತೆರಳಿದ್ದಾರೆ. ಡಿಕೆಶಿ ಕೂಡ ತಿಲಕ ಇಟ್ಟುಕೊಳ್ಳದೆ, ಬೇಡ ಎಂದು ತೆರಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!