July 31, 2026
Friday, July 31, 2026
spot_img

ನಾಂದೇಡ್ to ಬೀದರ್ ರೈಲು ಮಾರ್ಗ ವಿಳಂಬಕ್ಕೆ ಕಾರಣ ಏನು? ಚವಾಣ್ ಪತ್ರದಲ್ಲಿ ಏನಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ನಾಂದೇಡ್ ಹಾಗೂ ಕರ್ನಾಟಕದ ಬೀದರ್ ನಡುವಿನ ಹೊಸ ರೈಲು ಮಾರ್ಗ ಕಾರ್ಯ ಮುಂದುವರಿಯಲು ತಡವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಅಶೋಕ್ ಚವಾಣ್ ಪತ್ರ ಬರೆದು ವಿಳಂಬದ ಹಿನ್ನೆಲೆಯನ್ನು ವಿವರಿಸಿದ್ದಾರೆ.

ಸುಮಾರು 155 ಉದ್ದದ ಈ ರೈಲು ಮಾರ್ಗದಲ್ಲಿ 100 ಭಾಗ ಮಹಾರಾಷ್ಟ್ರ ವ್ಯಾಪ್ತಿಗೆ ಬರುತ್ತದೆ ಎಂದು ಅವರು ತಿಳಿಸಿದ್ದಾರೆ. ಯೋಜನೆ ಜಾರಿಗೆ ಬರಲು ಕರ್ನಾಟಕ ಸರ್ಕಾರದ ಅಂತಿಮ ಒಪ್ಪಿಗೆ ಇನ್ನೂ ಲಭ್ಯವಾಗಿಲ್ಲ ಎನ್ನುವುದೇ ತಡವಾಗುತ್ತಿರುವ ಪ್ರಮುಖ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕೇಂದ್ರ ಸರ್ಕಾರವು 50:50 ವೆಚ್ಚ ಹಂಚಿಕೆ ಆಧಾರದ ಮೇಲೆ ಕಾರ್ಯಗತಗೊಳಿಸಲು ನಿರ್ಧರಿಸಿದ್ದು, ಮಹಾರಾಷ್ಟ್ರ ಈಗಾಗಲೇ ತನ್ನ ಪಾಲಿನ ವೆಚ್ಚಕ್ಕೆ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಈ ಮಾರ್ಗ ನಿರ್ಮಾಣವಾದರೆ ಶ್ರೀ ಹಜೂರ್ ಸಾಹಿಬ್ ಮತ್ತು ನಾನಕ್ ಝೀರಾ ಸಾಹಿಬ್ ಯಾತ್ರಾಕ್ಷೇತ್ರಗಳಿಗೆ ನೇರ ಸಂಪರ್ಕ ಸಿಗಲಿದೆ. ಇದರಿಂದ ಯಾತ್ರಿಕರಿಗೆ ಅನುಕೂಲವಾಗುವುದರ ಜೊತೆಗೆ ವ್ಯಾಪಾರ, ಪ್ರವಾಸೋದ್ಯಮ ಮತ್ತು ಉದ್ಯೋಗಾವಕಾಶಗಳ ಹೆಚ್ಚಳಕ್ಕೂ ನೆರವಾಗಲಿದೆ ಎಂದು ಪತ್ರದಲ್ಲಿ ಮಹತ್ವದ ಮಾತು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !