ಡಿಕೆಶಿ ಸಾಹೇಬ್ರು ಎಂತಾ ಸುದ್ದಿ ಕೊಟ್ರು ಮಾರ್ರೆ: ಈ ಬಾರಿ ಮೈಸೂರು ದಸರಾ ವೈಭೋಗವೇ ವಿಶೇಷ!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ವಿನೂತನವಾಗಿ ಆಚರಿಸುವ ಸಲುವಾಗಿ ಕಂಬಳವನ್ನು ದಸರಾದಲ್ಲಿ ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳ ನಮ್ಮ ರಾಜ್ಯದ ಕರಾವಳಿ ಭಾಗ ವಿಶೇಷವಾದ ಆಚರಣೆ. ಹೀಗಾಗಿ ಈ ಬಾರಿ ದಸರಾದಲ್ಲಿ ಕಂಬಳವನ್ನು ಸೇರಿಸಲಾಗುವುದು. ಇದನ್ನು ನಡೆಸಲು ಅಗತ್ಯವಾದ ಸ್ಥಳ ಹುಡುಕುವಂತೆ ಇಲ್ಲಿನ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಹಳೆಯ ಒಂದಷ್ಟು ಪದ್ಧತಿಗಳನ್ನು ಕೈಬಿಟ್ಟು ಹೊಸ ಪೀಳಿಗೆಯನ್ನು ಸೆಳೆಯುವಂತೆ ಕಾರ್ಯಕ್ರಮಗಳನ್ನು ಈ ಬಾರಿಯ ದಸರಾದಲ್ಲಿ ಆಯೋಜಿಸುವ ಕುರಿತು ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಸಭೆ ನಡೆಸೋಣ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!