ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿಯಾಗಲು ಜೆಡಿಎಸ್ (JDS) ಬೆಂಬಲ ಕೋರಲು ಹೋಗಿದ್ದರು ಎಂಬ ಜಿಟಿ ದೇವೇಗೌಡರ ಆರೋಪವನ್ನು ಸಚಿವ ಸತೀಶ್ ಜಾರಕಿಹೊಳಿ ತಳ್ಳಿಹಾಕಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಭೇಟಿಯಿಂದ ಉದ್ಭವವಾಗಿರುವ ನಾನಾ ಪ್ರಶ್ನೆಗಳಿಗೆ ಉತ್ತರ ನೀಡಿದ ಸಚಿವ, ಭೂತಯ್ಯನ ಮಗ ಅಯ್ಯು ಚಿತ್ರದ ಸನ್ನಿವೇಶವೊಂದನ್ನು ವಿವರಿಸಿ ನಾನು ಹಾಗಲ್ಲ ಎಂದಿದ್ದಾರೆ.
ಜೆಡಿಎಸ್ನ 14 ಶಾಸಕರನ್ನು ತಗೆದುಕೊಂಡು ಏನು ಮಾಡೋಣ? ನಮ್ಮ ಪಕ್ಷದ ಗಾಡಿ ಫುಲ್ ಇದೆ. ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾವು ವೇಟಿಂಗ್ ಲಿಸ್ಟ್ನಲ್ಲಿದ್ದೇವೆ. ಅಲ್ಲಿಯೇ ಕಾಯ್ತೇವೆ ಎಂದು ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.