ರೇಣುಕಾಸ್ವಾಮಿ ಮೆಸೇಜ್‌ಗೂ ನಿಮ್ಮ ಮೆಸೇಜ್‌ಗೂ ಏನ್ರೋ ವ್ಯತ್ಯಾಸ?: ದರ್ಶನ್ ಫ್ಯಾನ್ಸ್ ವಿರುದ್ಧ ಮತ್ತೆ ಗುಡುಗಿದ ರಮ್ಯಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ನಟಿ ರಮ್ಯಾ ಇದೀಗ ಮತ್ತೆ ನಟ ದರ್ಶನ್ ತೂಗುದೀಪ ಫ್ಯಾನ್ಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇತ್ತೀಚೆಗೆ ಸಹ ಸುಪ್ರೀಂಕೋರ್ಟ್​​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಾಗಲೂ ಸಹ ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕುವ ವಿಶ್ವಾಸ ವ್ಯಕ್ತಪಡಿಸಿದ್ದರು. ಅದಾದ ಬಳಿಕ ದರ್ಶನ್ ಅಭಿಮಾನಿಗಳು ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳನ್ನು ಹರಿಬಿಟ್ಟಿದ್ದರು. ಅದಕ್ಕೆ ಪ್ರತಿಯಾಗಿ ರಮ್ಯಾ ಸಹ ಆಕ್ರೋಶ ಹೊರಹಾಕಿದ್ದರು. ಇಂದು ಮತ್ತೆ ರಮ್ಯಾ, ದರ್ಶನ್ ಅಭಿಮಾನಿಗಳ ವರ್ತನೆಯನ್ನು ಖಂಡಿಸಿದ್ದಾರೆ.

ಶನಿವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದ ನಟಿ ರಮ್ಯಾ, ‘ದರ್ಶನ್ ಅಭಿಮಾನಿಗಳಿಗೆ ನನ್ನ ಇನ್​ಸ್ಟಾಗ್ರಾಂಗೆ ಸ್ವಾಗತ. ರೇಣುಕಾಸ್ವಾಮಿಗೆ ಯಾಕೆ ನ್ಯಾಯ ಸಿಗಬೇಕು ಎಂಬುದಕ್ಕೆ ಇದೇ ಕಾರಣ’ ಎಂದಿದ್ದರು.

ಇದಾದ ಬಳಿಕ ನಟಿ ರಮ್ಯಾರ ಈ ಪೋಸ್ಟ್‌ಗೆ ಉರಿದುಬಿದ್ದಿದ್ದ ದರ್ಶನ್ ಫ್ಯಾನ್ಸ್ ಸೋಷಿಯಲ್ ಮೀಡಿಯಾಗಳಲ್ಲಿ ನಟಿ ರಮ್ಯಾ ವಿರುದ್ಧ ಕೆಟ್ಟ, ಕೊಳಕು ಸಂದೇಶಗಳನ್ನು ಹರಿಯಬಿಟ್ಟಿದ್ದರು.

ಇಂದು ಮತ್ತೆ ಇನ್​ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡಿರುವ ‘ರೇಣುಕಾಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂಥಹಾ ಸ್ತ್ರೀದ್ವೇಷಿ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ’ ಎಂದಿದ್ದಾರೆ ರಮ್ಯಾ. ಅದರ ಜೊತೆಗೆ ದರ್ಶನ್ ಅಭಿಮಾನಿಗಳು ತಮಗೆ ಅವರಿಗೆ ಮಾಡಿರುವ ಅಶ್ಲೀಲ ಸಂದೇಶಗಳನ್ನು ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ರಮ್ಯಾ ಹಂಚಿಕೊಂಡಿದ್ದಾರೆ.

ಇದೀಗ, ನಟಿ ರಮ್ಯಾ ಹಾಗೂ ಡಿ ಬಾಸ್ ಫ್ಯಾನ್ಸ್ ನಡುವಿನ ಸೋಷಿಯಲ್ ಮೀಡಿಯಾ ವಾರ್ ತಾರಕಕ್ಕೇರಿದ್ದು, ರಮ್ಯಾ ಕಡೆಯಿಂದ ಒಂದಾದ ಬಳಿಕ ಮತ್ತೊಂದು ಪೋಸ್ಟ್ ಬರುತ್ತಿದೆ. ಹಾಗೇ, ನಟ ದರ್ಶನ್ ಫ್ಯಾನ್ಸ್ ಕಡೆಯಿಂದ ರಮ್ಯಾ ವಿರುದ್ಧ ಪೋಸ್ಟ್‌ಗಳು, ಕೆಟ್ಟ ಕಾಮೆಂಟ್‌ಗಳು ಹರಿದುಬರುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!