ಮತ್ತೆ ವಾಯುಭಾರ ಕುಸಿತ, ರಾಜ್ಯದಲ್ಲಿ ಹೇಗಿದೆ ಹವಾಮಾನ..?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯ ಕೇರಳ ಕಡಲ ತೀರದ ಸಮೀಪ ವಾಯುಭಾರ ಕುಸಿತದ ಲಕ್ಷಣ ಗೋಚರಿಸಿದೆ. ಈ ಬೆಳವಣಿಗೆ ದಕ್ಷಿಣ ಕರ್ನಾಟಕದ ಮೇಲೂ ಪ್ರತಿಕೂಲ ಪರಿಣಾಮ ಬೀರಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಹನಿ ಕಡಿಯದ ಭರ್ಜರಿ ಮಳೆ ನಿರೀಕ್ಷಿಸಲಾಗಿದೆ. ಮೇ.19ರ ತನಕ ಈ ವಾತಾವರಣ ಮುಂದುವರಿಯಲಿದೆ, ಬಳಿಕ ಕರಾವಳಿ ಸಹಿತ ರಾಜ್ಯದಲ್ಲಿ ಮಳೆಯ ತೀವ್ರತೆ ಕ್ಷೀಣವಾಗಲಿದೆ. ಜೊತೆಗೆ ವಾತಾವರಣದಲ್ಲಿನ ಈ ವಿದ್ಯಮಾನ ಮುಂಗಾರು ಆಗಮನದ‌ ಅವಧಿಯಲ್ಲಿ ವ್ಯತ್ಯಯ ಉಂಟುಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಿಸಿದ್ದಾರೆ.

ಎಲ್ಲೆಲ್ಲಿ ಭಾರೀ ಮಳೆ?
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗ, ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢದಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಸಾಧಾರಣ ಮಳೆ?
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮೀನುಗಾರರು ಕಡಲಿಗಿಳಿಯದಂತೆ ಈಗಾಗಲೇ ಆಡಳಿತಗಳು ಎಚ್ಚರಿಕೆ ನೀಡಿದ್ದು, ನಾಗರೀಕರೂ ಅನಾವಶ್ಯಕವಾಗಿ ಮಳೆಗೆ ಮೈಯೊಡ್ಡದಂತೆ ಎಚ್ಚರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!