‘ಗಣಿಗಾರಿಕೆ ನಿಲ್ಲಿಸಿ ಎಂದಾಗ ನನಗೂ ಪ್ರಾಣ ಬೆದರಿಕೆ ಕರೆ ಬಂದಿತ್ತು’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಷ್ ತಮಗೆ ಬಂದಿದ್ದ ಪ್ರಾಣ ಬೆದರಿಕೆ ಕರೆ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ.

ಐದು ವರ್ಷಗಳಲ್ಲಿ ನಾನು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದೇನೆ. ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದೆ. ಈ ವೇಳೆ ಹೋರಾಟ ನಿಲ್ಲಿಸಿ ಎಂದು ನನಗೆ ಒತ್ತಡ ಹಾಗೂ ಪ್ರಾಣ ಬೆದರಿಕರ ಕರೆಗಳು ಬಂದಿದ್ದವು. ಆದರೆ ಭಯಪಡದೆ ಹೋರಾಟ ಮಾಡಿದೆ. ಹೈಕೋರ್ಟ್ ಗಣಿಗಾರಿಕೆಯನ್ನು ನಿಲ್ಲಿಸಿತು. ಒಳಿತಿಗೆ ಜಯ ಸಿಕ್ಕಿತು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!