ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಷ್ ತಮಗೆ ಬಂದಿದ್ದ ಪ್ರಾಣ ಬೆದರಿಕೆ ಕರೆ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ಐದು ವರ್ಷಗಳಲ್ಲಿ ನಾನು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದೇನೆ. ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದೆ. ಈ ವೇಳೆ ಹೋರಾಟ ನಿಲ್ಲಿಸಿ ಎಂದು ನನಗೆ ಒತ್ತಡ ಹಾಗೂ ಪ್ರಾಣ ಬೆದರಿಕರ ಕರೆಗಳು ಬಂದಿದ್ದವು. ಆದರೆ ಭಯಪಡದೆ ಹೋರಾಟ ಮಾಡಿದೆ. ಹೈಕೋರ್ಟ್ ಗಣಿಗಾರಿಕೆಯನ್ನು ನಿಲ್ಲಿಸಿತು. ಒಳಿತಿಗೆ ಜಯ ಸಿಕ್ಕಿತು ಎಂದು ಹೇಳಿದ್ದಾರೆ.