ಕಾವೇರಿ ಆರತಿ ಯಾವಾಗ ನಡೆಯಲಿದೆ? ವಾರಕ್ಕೆ ಎಷ್ಟು ಬಾರಿ? ಡೀಟೇಲ್ಸ್‌ ಕೊಟ್ಟ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಜಲಾಶಯದ ಬಳಿ ವಾರಕ್ಕೆ ಮೂರು ಬಾರಿ ಕಾವೇರಿ ಆರತಿ ಆಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಮುಂದಿನ 2–3 ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಿಸಲಾಗುವುದು. ಕಾರ್ಯಕ್ರಮಕ್ಕೆ ಜಲಸಂಪನ್ಮೂಲ, ಧಾರ್ಮಿಕ ದತ್ತಿ, ಕನ್ನಡ ಮತ್ತು ಸಂಸ್ಕೃತಿ, ಪಿಡಬ್ಲ್ಯೂಡಿ, ಪ್ರವಾಸೋದ್ಯಮ ಮತ್ತು ಇಂಧನ ಇಲಾಖೆಗಳಿಂದ ಅನುದಾನ ನೀಡಲಾಗುವುದು ಎಂದು ಹೇಳಿದರು.

ಪ್ರಯತ್ನ ವಿಫಲ ಆಗಬಹುದು, ಪ್ರಾರ್ಥನೆ ವಿಫಲ ಆಗಲ್ಲ. ಕೆಆರ್‌ಎಸ್‌ನಲ್ಲಿ ಹೊಸ ರೂಪ ಕೊಡಲು ಪ್ರಾರಂಭ ಮಾಡಿದ್ದೇವೆ. ವಾರಕ್ಕೆ ಮೂರು ದಿನ ಕಾವೇರಿ ಆರತಿ ನಡೆಯಲಿದೆ. 10 ಸಾವಿರ ಆಸನಗಳ ವ್ಯವಸ್ಥೆ ಮಾಡುತ್ತೇವೆ. ಇದರಲ್ಲಿ ಶೇ.70 ಆಸನಗಳು ಉಚಿತ, ಶೇ.30 ಟಿಕೆಟ್ ಮಾಡುತ್ತೇವೆ ಎನ್ನುವ ಮಾಹಿತಿ ಒದಗಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!