ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆನಪಿಟ್ಟುಕೊಳ್ಳಿ ಎಲ್ಲೆಲ್ಲಿ ರಾಹುಲ್ ಗಾಂಧಿ ಬರುತ್ತಾರೆ ಅಲ್ಲೆಲ್ಲ ದೊಡ್ಡಮಟ್ಟದಲ್ಲಿ ಕಾಂಗ್ರೆಸ್ ಗೆಲ್ಲುತ್ತೇವೆ. ಒಂದು ವೇಳೆ ಗೆಲ್ಲದಿದ್ದರೆ ನನ್ನ ಹೆಸರು ಬದಲಾಯಿಸುತ್ತೇನೆ ಎಂದು ಸಿಸಿ ಪಾಟೀಲ್ಗೆ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ (Nalapad) ಸವಾಲ್ ಹಾಕಿದ್ದಾರೆ.
ಗದಗನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೂತ್ ಕಾಂಗ್ರೆಸ್ನಿಂದ ಟಿಕೆಟ್ ಕೊಡಿಸುವಲ್ಲಿ ನಲಪಾಡ್ ವಿಫಲ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, ವಿನೋದ್ ಅಸೂಟಿಗೆ ಸರಕಾರದಲ್ಲಿ ಚೇರ್ಮನ್ ಸೀಟ್ ಕೊಡುವ ಭರವಸೆ ನೀಡಲಾಗಿದೆ. ಬೇರೆ ಕಡೆ ಗೆಲ್ಲುವ ಅವಕಾಶ ಇದ್ದಲ್ಲಿ ಯುವಕರಿಗೆ ಟಿಕೆಟ್ ಕೊಡಲಾಗಿದೆ ಎಂದು ತಿಳಿಸಿದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್ ಮತ್ತಷ್ಟು ಬಲ ಬಂದಿದೆ. 224 ಸೀಟ್ನಲ್ಲಿ ಒಬ್ಬ ಮುಸ್ಲಿಂರಿಗೂ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಬಿಜೆಪಿಯಲ್ಲಿ ಯಾರೂ ಮುಸಲ್ಮಾನರು ಇಲ್ವಾ ಅಂತ ಪ್ರಶ್ನೆ ಮಾಡಿದ್ದು, ಈ ಬಗ್ಗೆ ಯಾರೂ ಮಾತನಾಡೋದಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.