ಹೊಸದಿಗಂತ ವರದಿ ಶಿವಮೊಗ್ಗ:
ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಬಿಜೆಪಿ ಮೂರು, ಕಾಂಗ್ರೆಸ್ ಮೂರು ಹಾಗೂ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಮುನ್ನಡೆ ಹೊಂದಿದೆ.
ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಎಸ್.ಚನ್ನಬಸಪ್ಪ, ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ, ತೀರ್ಥಹಳ್ಳಿ ಯಲ್ಲಿ ಆರಗ ಜ್ನಾನೇಂದ್ರ ಮುನ್ನಡೆ ಹೊಂದಿದ್ದಾರೆ.
ಸೊರಬದಲ್ಲಿ ಮಧು ಬಂಗಾರಪ್ಪ, ಭದ್ರಾವತಿ ಯಲ್ಲಿ ಬಿ.ಕೆ.ಸಂಗಮೇಶ್ವರ, ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಮುನ್ನಡೆ ಹೊಂದಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ನ ಶಾರದಾ ಪೂರ್ಯಾನಾಯ್ಕ ಮುನ್ನಡೆಯಲಿದ್ದಾರೆ. ಇಲ್ಲಿನ ಸಹ್ಯಾದ್ರಿ ಕಲಾ ಕಾಲೇಜು ಆವರಣದಲ್ಲಿ ಮತ ಎಣಿಕೆ ನಡೆದಿದೆ.