ಬೋಟ್ ಕಟ್ಟುವ ವೇಳೆ ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೀನುಗಾರಿಕೆ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ಎಳೆದು ದಕ್ಕೆಗೆ ಕಟ್ಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಸಮುದ್ರದಲ್ಲಿ ಬಿದ್ದು ಮೃತ ಪಟ್ಟ ಘಟನೆ ತಾಲೂಕಿನ ಬೆಲೇಕೇರಿ ಸಮುದ್ರ ತೀರದಲ್ಲಿ ನಡೆದಿದೆ.
ಬೆಲೇಕೇರಿ ಪೊಲೀಸ್ ಸ್ಟೇಶನ್ ವಾಡಾ ನಿವಾಸಿ ವಿಜಯ ಮಾದೇವ ಬಾನಾವಳಿಕರ (24) ಮೃತ ವ್ಯಕ್ತಿಯಾಗಿದ್ದು ಸ್ಥಳೀಯ ಕೃಷ್ಣ ಬಾನಾವಳಿಕರ ಎನ್ನುವವರ ಬೋಟಿನಲ್ಲಿ ಮೀನುಗಾರಿಕೆ ಕೆಲಸಕ್ಕೆ ತೆರಳಿದ್ದ ಈತ ರಾತ್ರಿ ಮೀನುಗಾರಿಕೆ ನಡೆಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಬೋಟ್ ಹಗ್ಗವನ್ನು ದಕ್ಕೆಗೆ ಕಟ್ಟುವ ಸಂದರ್ಭದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿರುವುದಾಗಿ ತಿಳಿದು ಬಂದಿದ್ದು ಉಳಿದ ಮೀನುಗಾರರು ಹುಡುಕಿ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು ವೈದ್ಯರು ಆತ ಮೃತ ಪಟ್ಟಿರುವುದಾಗಿ ಘೋಷಿಸಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!