ʼಟ್ಯಾಂಕರ್‌ ಸಿಟಿʼ ಆಗೋಕೆ ಕಾರಣ ಯಾರು? ಫಸ್ಟು ಮೇಕೆದಾಟು ಯೋಜನೆಗೆ ಒಕೆ ಹೇಳಿ: ಪ್ರಧಾನಿ ವಿರುದ್ಧ ಸಿಎಂ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟೆಕ್‌ ಸಿಟಿಯನ್ನು ಟ್ಯಾಂಕರ್‌ ಸಿಟಿ ಮಾಡಿದ ಕ್ರೆಡಿಟ್‌ ಸಿಎಂ ಸಿದ್ದರಾಮಯ್ಯಗೆ ಸಲ್ಲಬೇಕು ಎಂದು ಪ್ರಧಾನಿ ಮೋದಿ ನೀಡಿದ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಬಲವಾಗಿ ವಿರೋಧಿಸಿದ್ದಾರೆ.

ಟ್ಯಾಂಕರ್‌ ಸಿಟಿಯಾಗೋಕೆ ಯಾರು ಕಾರಣ? ಇವತ್ತೇ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಲಿ, ಆಗ ನಾಳೆಯೇ ಕಾಮಗಾರಿ ಶುರು ಮಾಡಿ ಬೆಂಗಳೂರಿನಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ತಿಲಾಂಜಲಿ ಹಾಡುತ್ತೇನೆಂದು ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇದೆ. ಅದನ್ನು ಒಪ್ಕೊಳ್ತೇನೆ. ಅದರ ಪರಿಹಾರಕ್ಕಾಗಿ ನಾವು ನಾಳೆಯೇ ಮೇಕೆದಾಟು ಕಾಮಗಾರಿ ಆರಂಭಿಸಲು ಸಿದ್ಧ. ಆದರೆ, ಅವರು ಅನುಮತಿ ಕೊಡುತ್ತಾರೆಯೇ ಎಂದು ಕೇಂದ್ರ ಸರ್ಕಾರದ ಕಾಲೆಳೆದರು.

ಕೇಂದ್ರ ಸರ್ಕಾರ ಬರೀ ಬಾಯ್‌ ಮಾತಿನ ಸರ್ಕಾರ. ನಮಗೆ ಅಲ್ಲಿಂದ ಸಹಾಯ ಆಗಿಲ್ಲ. ಬಡವರ ಹೊಟ್ಟೆ ತುಂಬಿಸಲು ಅಕ್ಕಿ ನೀಡಿದ್ದು ಕೇಂದ್ರ ಅಲ್ಲ ನಾನು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!