ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಸಂಬಂಧ ಮಾತಿನ ಜಟಾಪಟಿ ಜೋರಾಗಿದ್ದು,. ಡಿಕೆ ಸಹೋದರು ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪವನ್ನೇ ಮಾಡಿದ್ದಾರೆ. ಇದೀಗ ಡಿಕೆ ಸಹೋದರರ ಆರೋಪಕ್ಕೆ ಕುಮಾರಸ್ವಾಮಿ (HD Kumaraswamy) ಕೆಂಡಮಂಡಲರಾಗಿದ್ದು, ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್ನನ್ನ ಮಲೆಷ್ಯಾಗೆ ಕಳಿಸಿದ್ಯಾರು ಎಂದು ಪ್ರಶ್ನಿಸುವ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ಡ್ರೈವರ್ ವಿಡಿಯೋ ರಿಲೀಸ್ ಮಾಡಿದ್ನಲ್ವಾ? ಆತ ಮಾತನಾಡಿರುವ ವಿಡಿಯೋ ಯಾರು ಮಾಡಿದ್ದು? ನಿನ್ನೆ ಅವನ ಕೈಯಲ್ಲಿ ವಿಡಿಯೋ ಬಿಟ್ಟಿದ್ರು, ಏನ್ ಹೇಳಿಕೆ ಕೊಟ್ಟಾ, ದೇವರಾಜ್ ಕೈಯಲ್ಲಿ ಪೆನ್ಡ್ರೈವ್ ಕೊಟ್ಟಿದ್ದೆ ಅಂತಾ ಹೇಳಿದ್ದ. ಆದರೆ ಇಂದು ಬೆಳಗ್ಗೆ ಈ ಚಿಲ್ಲರೆ ಸಹೋದರರು ಕುಮಾರಸ್ವಾಮಿನೇ ಬಿಟ್ಟಿರಬೇಕು ಅಂತಾ ಹೇಳಿಕೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ದೇವರಾಜ್ ಮೊದಲು ನನ್ನನ್ನು ಭೇಟಿಯಾಗಿದ್ದಾನೆಂದು ಈ 420ಗಳು ಹೇಳಿದ್ದಾರೆ. ಎಲ್ಲಿಂದ ವಿಡಿಯೋ ಮಾಡಿ ಬಿಟ್ಟಿದ್ದಾನೆ ಅದನ್ನು ಮೊದಲು ತಿಳಿದುಕೊಳ್ಳಿ. ಸುಲಭವಾಗಿ ನಮ್ಮನು ಕೆಣಕಿದರೆ ನಾವು ಸುಮ್ಮನೇ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.