ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು – ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ಅಮಾಯಕ ಭಾರತೀಯ ಮಹಿಳೆಯರ ಪತಿಯಂದಿರನ್ನು ಹತ್ಯೆ ಮಾಡಿದ ಉಗ್ರರು, ಮೋದಿಗೆ ಹೋಗಿ ಹೇಳು ಎಂಬ ಸಂದೇಶ ನೀಡಿದ್ದರು. ಇದೀಗ 26 ಭಾರತೀಯರ ನರಮೇಧಕ್ಕೆ ಭಾರತ ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕ್ನಲ್ಲಿದ್ದ ಉಗ್ರರ ನೆಲೆಗಳ ಮೇಲೆ ಏರ್ಸ್ಟ್ರೈಕ್ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ.
ಇನ್ನೂ, ಪಾಕ್ ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಹೆಸರನ್ನು ಸೂಚಿಸಿದ್ದೇ ಪ್ರಧಾನಿ ನರೇಂದ್ರ ಮೋದಿ ಎಂದು ತಿಳಿದುಬಂದಿದೆ.
ಮೋದಿ ಅವರಿಂದ ‘ಆಪರೇಷನ್ ಸಿಂಧೂರ’ ಎಂದು ಮಿಲಿಟರಿ ಕಾರ್ಯಾಚರಣೆಗೆ ನಾಮಕರಣ ಮಾಡಲಾಗಿದೆ. ಹೀಗಾಗಿ ಭಾರತದ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಹೆಸರು ಅನೇಕ ಕಾರಣಕ್ಕೆ ವಿಶಿಷ್ಟ, ವಿಶೇಷವಾಗಿದೆ. ಏಕೆಂದರೆ ಸಿಂಧೂರ ಎಂಬ ಪದವು ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿ, ರಕ್ಷಣೆ, ಸಮೃದ್ಧಿ, ಸೌಭಾಗ್ಯ, ಶಕ್ತಿ ದೇವತೆ ಪಾರ್ವತಿ, ದುರ್ಗಾ ಶಕ್ತಿಯ ಸಂಕೇತವಾಗಿದೆ. ಸಿಂದೂರವು ಕೇವಲ ಒಂದು ವಸ್ತುವಲ್ಲ, ಭಾರತೀಯ ಸಂಸ್ಕೃತಿಯಲ್ಲಿ ಆಳವಾದ ಭಾವನಾತ್ಮಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಮೌಲ್ಯವನ್ನು ಹೊಂದಿದೆ.