ಈಗಿನ ಕಾಲದ ಮಕ್ಕಳ ಮನಸ್ಸು ಯಾಕಿಷ್ಟು ವೀಕ್? ಸೈಕಲ್ ವಿಷ್ಯಕ್ಕೆ ಪ್ರಾಣ ಬಿಟ್ಟ ಬಾಲಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಕ್ಕದ ಮನೆ ಗೆಳತಿ ಸೈಕಲ್ ಕೊಡುವುದಿಲ್ಲ ಎಂದಿದ್ದಕ್ಕೆ ಬಾಲಕಿಯೋರ್ವಳು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ನಗರದಲ್ಲಿ ನಡೆದಿದೆ.

ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಸ್ಪಂದನ ನಿತ್ಯವೂ ತನ್ನ ಸ್ನೇಹಿತೆಯೊಂದಿಗೆ ಸೈಕಲ್ ಓಡಿಸುತ್ತಿದ್ದಳು. ಘಟನೆಯ ದಿನ, ಸೈಕಲ್ ಕೊಡಲು ನಿರಾಕರಿಸಿದ್ದರಿಂದ ಮನನೊಂದು, ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!