‘ಮಹಾ’ ಜನತೆಯಲ್ಲಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಿದ್ದು ಯಾಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ ಮಹತ್ವದ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಉದ್ಧವ್ ಠಾಕ್ರೆ , ‘ಮಹಾ’ ಜನತೆಯಲ್ಲಿ ಕಳೆದ ಎರಡೂವರೆ ವರ್ಷದಲ್ಲಿ ಏನಾದರೂ ತಪ್ಪಾಗಿದ್ದರೇ ಕ್ಷಮಿಸಿ ಎಂಬುದಾಗಿ ಕ್ಷಮೆಯಾಚಿಸಿದ್ದಾರೆ.
ಈ ಮೂಲಕ ಇಂದು ರಾತ್ರಿ ಇಲ್ಲವೇ ನಾಳೆ ಬೆಳಿಗ್ಗೆ ಸದನದಲ್ಲಿ ವಿಶ್ವಾಸಮತ ಯಾಚನೆಗೆ ಮುನ್ನವೇ ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆಯೂ ಇಂದು ಮಹತ್ವದ ಸಚಿವ ಸಂಪುಟ ಸಭೆಯನ್ನು ಸಿಎಂ ಉದ್ಧವ್ ಠಾಕ್ರೆ ನಡೆಸಿದರು. ಸಚಿವ ಸಂಪುಟ ಸಭೆಯಲ್ಲಿ ಮಹಾ ಆಘಾಡಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 2.5 ವರ್ಷಗಳ ಕಾಲ ಉತ್ತಮ ಕೆಲಸ ಮಾಡಿದ್ದೀರಿ. ನಿಮ್ಮ ಬೆಂಬಲವನ್ನು ಇನ್ನು ಮುಂದೆಯೂ ಕೋರುತ್ತೇನೆ ಎಂದು ಭಾವುಕ ಹೇಳಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!