‘ಸಿಎಂ ಬೊಮ್ಮಾಯಿ ಭೇಟಿಗೆ ರಾಜಕೀಯದ ಬಣ್ಣ ಯಾಕೆ?’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗಷ್ಟೇ ನಟ ಕಿಚ್ಚ ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕನಾಗಿ ರಾಜಕೀಯಕ್ಕೆ ಎಂಟ್ರಿ ನೀಡಿದ್ದರು. ಇದರ ಜೊತೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಬಿಜೆಪಿಗೆ ಎಂಟ್ರಿ ಕೊಡ್ತಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡಿದ್ದು, ರಿಷಬ್ ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಕೊಲ್ಲೂರು ಮೂಕಾಂಬಿಕೆ ದೇವಿ ದರುಶನದ ವೇಳೆ ಸಿಎಂ ಬೊಮ್ಮಾಯಿ ಹಾಗೂ ರಿಷಬ್ ಒಟ್ಟಿಗೇ ಕಾಣಿಸಿಕೊಂಡಿದ್ದರು, ಪದೇ ಪದೆ ಸಿಎಂ ಜತೆ ರಿಷಬ್ ಕಾಣಿಸಿಕೊಳ್ಳುತ್ತಿದ್ದು, ರಾಜಕೀಯಕ್ಕೆ ಎಂಟ್ರಿ ಕೊಡುವ ಲಕ್ಷಣಗಳಿವೆ ಎನ್ನಲಾಗಿತ್ತು. ಆದರೆ ರಿಷಬ್ ಇದನ್ನು ಅಲ್ಲಗಳೆದಿದ್ದಾರೆ.

ನಾನು ದೇಗುಲಕ್ಕೆ ತೆರಳಿದ್ದೆ, ಮಾನ್ಯ ಮುಖ್ಯಮಂತ್ರಿಗಳೂ ದೇಗುಲಕ್ಕೆ ಬಂದಿದ್ದರು. ಅಲ್ಲಿ ಭೇಟಿಯಾಯಿತಷ್ಟೇ ಇದಕ್ಕೆ ರಾಜಕೀಯ ಬಣ್ಣ ಹಚ್ಚಬೇಡಿ. ನಾನು ಕಾಂತಾರ-2 ಬರವಣಿಗೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೇನೆ, ನನ್ನ ಮೇಲೆ ಸದಾ ಪ್ರೀತಿಯಿರಲಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!