ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಡಲೂರು ಕ್ಷೇತ್ರದ ಪಿಎಂಕೆ ಅಭ್ಯರ್ಥಿ ಥಂಗರ್ ಬಾಚನ್ ಗೆಲ್ಲುತ್ತಾರೆ ಎಂದು ಗಿಳಿಶಾಸ್ತ್ರ ನುಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಜ್ಯೋತಿಷಿಯನ್ನು ಹೇಗೆ ಎಳೆದೊಯ್ದು ಕಾರಿಗೆ ತಳ್ಳುತ್ತಾರೆ ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹುದು.
ಇದನ್ನು ಕಂಡ ಜನರು ಪೊಲೀಸರ ಕ್ರಮವನ್ನು ಖಂಡಿಸಿದ್ದಾರೆ. ಇದು DMK ನೇತೃತ್ವದ ಸರ್ಕಾರದ ಸರ್ವಾಧಿಕಾರಿ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೀಗ ಈ ವಿಡಿಯೋ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಅರಣ್ಯ ಇಲಾಖೆ ಪೊಲೀಸರ ಪ್ರಕಾರ, ವನ್ಯಜೀವಿ ಸಂರಕ್ಷಣಾ ಕಾಯ್ದೆಯ (1972) ಶೆಡ್ಯೂಲ್ 4 ರ ಪ್ರಕಾರ ಗಿಳಿಗಳನ್ನು ಪಂಜರದಲ್ಲಿ ಇಡುವುದು ಮತ್ತು ಅಂತಹ ಉದ್ದೇಶಗಳಿಗೆ ಬಳಸುವುದು ಕಾನೂನುಬಾಹಿರವಾಗಿದೆ. ಗಿಳಿಯನ್ನು ಮರಳಿ ಕಾಡಿಗೆ ಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.