ರಷ್ಯಾ-ಉಕ್ರೇನ್‌ ಸಂಘರ್ಷ ನಿವಾರಿಸುವಲ್ಲಿ ವಿಶ್ವಸಂಸ್ಥೆ ವಿಫಲವಾಗಿದ್ದು ಏಕೆ?: ಸಾಮಾನ್ಯಸಭೆಯಲ್ಲಿ ಭಾರತ ಪ್ರಶ್ನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎರಡು ವರ್ಷಗಳಿಂದ ‘ರಷ್ಯಾ ಮತ್ತು ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದ್ದು, ಆದ್ರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಉಭಯ ದೇಶಗಳ ನಡುವಿನ ಸಂಘರ್ಷವನ್ನು ನಿವಾರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಏಕೆ’ ಎಂದು ಭಾರತ ಪ್ರಶ್ನಿಸಿದೆ.

ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಈ ಕುರಿತು ಮಾತನಾಡಿರುವ ಭಾರತದ ಖಾಯಂಪ್ರತಿನಿಧಿಯಾಗಿರುವ ರುಚಿರಾ ಕಾಂಬೋಜ್‌, ಬಹುಪಕ್ಷೀಯವಾಗಿ ನಡೆಯುವ ಯಾವುದೇ ಪ್ರಯತ್ನಗಳು ಫಲ ನೀಡಬೇಕಾದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ರಚನೆಯಲ್ಲಿ ಸುಧಾರಣೆಯ ಅಗತ್ಯವಿದೆ ಎಂದು ವಿ ಪ್ರತಿಪಾದಿಸಿದ್ದಾರೆ.

2022ರ ಫೆಬ್ರುವರಿ 24ರಂದು ಆರಂಭಗೊಂಡಿರುವ ರಷ್ಯಾ-ಉಕ್ರೇನ್‌ ಯುದ್ಧದ ಕುರಿತು ವಿಶ್ವಸಂಸ್ಥೆಯ ಎಲ್ಲ ಸದಸ್ಯ ರಾಷ್ಟ್ರಗಳು ಯೋಚಿಸಬೇಕು ಹಾಗೂ ಎರಡು ಪ್ರಮುಖ ಪ್ರಶ್ನೆಗಳನ್ನು ನಮಗೆ ನಾವೇ ಕೇಳಿಕೊಳ್ಳಬೇಕಿದೆ’ ಎಂದರು.

‘ಈ ಸಂಘರ್ಷಕ್ಕೆ ಸಂಬಂಧಿಸಿ ಸ್ವೀಕಾರಾರ್ಹ ಅಥವಾ ಸಾಧ್ಯವೆನಿಸುವ ಪರಿಹಾರವನ್ನು ನಾವು ಹುಡುಕಿದ್ದೇವೆಯೇ?’. ಇಲ್ಲ ಎಂದಾದಲ್ಲಿ, ಜಾಗತಿಕವಾಗಿ ಶಾಂತಿ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸುವ ಜವಾಬ್ದಾರಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಏಕೆ ವಹಿಸಲಾಗಿದೆ? ಈ ವಿಷಯದಲ್ಲಿ ಮಂಡಳಿಯ ಕಾರ್ಯ ಪರಿಣಾಮಕಾರಿಯಾಗಿಲ್ಲವೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

‘ಸಂಘರ್ಷವನ್ನು ಕೊನೆಗಾಣಿಸುವಲ್ಲಿನ ಪ್ರಯತ್ನಗಳು ಫಲಪ್ರದವಾಗಬೇಕು ಎಂದಾದಲ್ಲಿ, ಭದ್ರತಾ ಮಂಡಳಿಯ ರಚನೆಯಲ್ಲಿ ಸುಧಾರಣೆಯಾಗಬೇಕು. ಇಲ್ಲದೇ ಹೋದರೆ, ಅದರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ. ಈ ನ್ಯೂನತೆಯನ್ನು ಸರಿಪಡಿಸದಿದ್ದಲ್ಲಿ, ಭದ್ರತಾ ಮಂಡಳಿಯು ನಮ್ಮ ಅಗತ್ಯಗಳನ್ನು ಪೂರೈಸುವುದೇ ಇಲ್ಲ’ ಎಂದೂ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!