ತಪ್ಪೇ ಮಾಡಿಲ್ಲದಾಗ ಬೆದರಿಕೆಗೆ ಯಾಕೆ ಹೆದರಲಿ? ಕ್ಷಮೆ ಕೇಳೋ ಮಾತೇ ಇಲ್ಲ: ಕಮಲ್‌ ಹಾಸನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಮಿಳಿನಿಂದ ಕನ್ನಡ ಬಂದಿದ್ದು ಎಂದು ನಟಿ ಕಮಲ್‌ ಹಾಸನ್‌ ಹೇಳಿಕೆ ನೀಡಿದ್ದರು. ಈ ರೀತಿ ಹೇಳಿಕೆಯಿಂದಾಗಿ ಸಾಕಷ್ಟು ಕನ್ನಡಿಗರು ಗರಂ ಆಗಿದ್ದು, ಕಮಲ್‌ ಹಾಸನ್‌ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಪಟ್ಟುಹಿಡಿದು ಕೂತಿದ್ದಾರೆ.

ಆದರೆ ಕಮಲ್‌ ಹಾಸನ್‌ ನಾನು ಕ್ಷಮೆ ಕೇಳೋ ಮಾತೇ ಇಲ್ಲ ಎಂದು ಕಡ್ಡಿ ತುಂಡಾದಂತೆ ಮಾತನಾಡಿದ್ದಾರೆ. ತಪ್ಪು ಮಾಡಿಲ್ಲ ಅಂದಮೇಲೆ ಕ್ಷಮೆ ಯಾಕೆ? ನನ್ನ ಮಾತಿನಲ್ಲಿ ಯಾವುದೇ ತಪ್ಪಿಲ್ಲ, ಹೆದರಿಕೆ ಬೆದರಿಕೆಗೆಲ್ಲ ನಾನು ಭಯ ಬೀಳೋದಿಲ್ಲ ಎಂದು ಹೇಳಿದ್ದಾರೆ.

ಕಮಲ್ ಹಾಸನ್ ಸಿನಿಮಾ ‘ಥಗ್ ಲೈಫ್’ನ ಕರ್ನಾಟಕದ ವಿತರಣೆ ಹಕ್ಕನ್ನು ಖರೀದಿಸಿರುವ ವೆಂಕಟೇಶ್ ಅವರನ್ನು ನಿನ್ನೆ ಫಿಲಂ ಚೇಂಬರ್​ಗೆ ಕರೆಸಿ ಸಭೆ ನಡೆಸಲಾಗಿದ್ದು, ಕಮಲ್ ಹಾಸನ್ ಬಳಿ ಕ್ಷಮೆ ಕೇಳಿಸುವ ಜವಾಬ್ದಾರಿಯನ್ನು ವೆಂಕಟೇಶ್ ಹೆಗಲಿಗೆ ಹಾಕಲಾಗಿತ್ತು.

ವೆಂಕಟೇಶ್ ಸಹ, ತಾವು ಪರಿಸ್ಥಿತಿಯ ಗಂಭೀರತೆಯನ್ನು ಕಮಲ್ ಅವರಿಗೆ ಮನವರಿಕೆ ಮಾಡಿ ಅಗತ್ಯ ಹೆಜ್ಜೆ ಇಡುವಂತೆ ಮನವಿ ಮಾಡುತ್ತೇವೆ ಎಂದಿದ್ದರು. ಅದಾದ 24 ಗಂಟೆಯೊಳಗೆ ಕಮಲ್ ಹಾಸನ್, ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!