ರಾಜ್ಯಕ್ಕೆ ಬರಬೇಕಾದಂತಹ ಹಣ ಯಾಕೆ ನೀಡಲಿಲ್ಲ? ಅಮಿತ್ ಶಾ ರಾಜ್ಯ ಪ್ರವಾಸಕ್ಕೆ ಡಿಕೆ ಶಿವಕುಮಾರ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದು, ರಾಜ್ಯಕ್ಕೆ ಕೇಂದ್ರದಿಂದ ಬರುವಂತಹ ಏಕ ನೀಡಲಿಲ್ಲ ಎಂದು ಅಮಿತ್ ಶಾ ಹೇಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದಂತಹ ಹಣ ಯಾಕೆ ನೀಡಲಿಲ್ಲ ಎಂದು ಅಮಿತ್ ಶಾ ಉತ್ತರಿಸಲಿ ರಾಜ್ಯದ ಜನರ ಬಗ್ಗೆ ವಿಶ್ವಾಸ ಇಲ್ವಾ ಅನ್ನೋದಕ್ಕೆ ಉತ್ತರ ನೀಡಲಿ ಮೇಕೆದಾಟು ಯೋಜನೆಗೆ ಕೇಂದ್ರ ಏಕೆ ಅನುಮತಿ ನೀಡಲಿಲ್ಲ? ಪ್ರಶ್ನಿಸಿದರು.

ವಿರೋಧ ಪಕ್ಷಗಳಿಗೆ ಐಟಿ ಅಧಿಕಾರಿಗಳು ನೊಟೀಸ್ ಕೊಟ್ಟಿದ್ದಾರೆ. ಬರ ಪರಿಹಾರ ಹಂಚಿಕೆಯಲ್ಲೂ ಕೇಂದ್ರದಿಂದ ಅನ್ಯಾಯ ಆಗಿದೆ ಇದಕ್ಕೆಲ್ಲ ಪ್ರಧಾನಿ ಮೋದಿ ಉತ್ತರ ಕೊಡಬೇಕು ದೇಶವನ್ನು ಉಳಿಸುವ ದೃಷ್ಟಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಮಿತ್ರ ಪಕ್ಷಗಳನ್ನು ಕೊಟ್ಟಿವೆ ನಾಯಕರು ಎಲ್ಲೆಲ್ಲಿ ಪ್ರಚಾರ ಹೋಗಬೇಕೆಂದು ಮಾಹಿತಿಯನ್ನು ಕೊಟ್ಟಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!