Saturday, December 9, 2023

Latest Posts

ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತ ಹೆಂಡತಿ: ಮದುವೆಯಾದ ಒಂದೇ ವರ್ಷದಲ್ಲಿ ಆತ್ಮಹತ್ಯೆಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್‍ನಲ್ಲಿ ನಡೆದಿದೆ.

ಐಬಿಎಂನಲ್ಲಿ ಉದ್ಯೋಗಿಯಾಗಿರುವ ಶ್ವೇತಾ (27) ನೇಣಿಗೆ ಶರಣಾದವರು. ಪತಿ ಅಭಿಷೇಕ್‌ ಅವರು ಹೊಂದಿರುವ ಅಕ್ರಮ ಸಂಬಂಧದಿಂದ ಬೇಸತ್ತು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಅಭಿಷೇಕ್ ವಿರುದ್ಧ ಮೃತಳ ಕುಟುಂಬಸ್ಥರು ಆರೋಪಿಸಿದ್ದರು.

ಅಭಿಷೇಕ್‌ ಮತ್ತು ಶ್ವೇತಾ ಅವರ ವಿವಾಹ 11 ತಿಂಗಳ ಹಿಂದಷ್ಟೇ ಅದ್ದೂರಿಯಾಗಿ ನಡೆದಿತ್ತು. ಅಭಿಷೇಕ್ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಅಭಿಷೇಕ್‌ ಮದುವೆಗೆ ಮುನ್ನ ಯುವತಿಯೊಬ್ಬಳೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಮದುವೆಯ ನಂತರ ಈ ವಿಚಾರ ಗೊತ್ತಾಗಿ ದಂಪತಿ ನಡುವೆ ಜಗಳವಾಗಿತ್ತು. ಬಳಿಕ ಪರಸ್ಪರ ರಾಜಿ ಪಂಚಾಯಿತಿ ಬಳಿಕ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ‌ ನಡುವೆ ಅಭಿಷೇಕ್‌ ಮತ್ತೆ ಹಳೇ ಚಾಳಿ‌ ಮುಂದುವರೆಸಿದ್ದು,ಇದರಿಂದ ಬೇಸತ್ತ ಶ್ವೇತಾ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಅಭಿಷೇಕ್‌ನನ್ನು ಬಂಧಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!