ದಂಪತಿ ನಡುವೆ ಕಲಹ: ಪತ್ನಿಯ ಕೊಲೆಯಲ್ಲಿ ಅಂತ್ಯ

ಹೊಸದಿಗಂತ ವರದಿ ಮಡಿಕೇರಿ:

ಪತಿಯೇ ಪತ್ನಿಗೆ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕುಶಾಲನಗರ ತಾಲೂಕಿನ ಚೇರಳ ಶ್ರೀಮಂಗಲ ಗ್ರಾಮದಲ್ಲಿ ನಡೆದಿದೆ.
ಬಟ್ಟೀರ ಷಷ್ಮಾ(44) ಎಂಬವರೇ ಪತಿಯ ಗುಂಡೇಟಿಗೆ ಬಲಿಯಾದ ದುರ್ದೈವಿ, ಪತಿ ಬಟ್ಟೀರ ಗೋಪಾಲ ಗುಂಡು ಹಾರಿಸಿರುವುದಾಗಿ ಆರೋಪಿಸಲಾಗಿದೆ.

ಮಂಗಳವಾರ ರಾತ್ರಿ ಪತಿ-ಪತ್ನಿ ನಡುವೆ ಕಲಹ ಏರ್ಪಟ್ಟ ಸಂದರ್ಭ ಗೋಪಾಲ್ ತನ್ನ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ‌ ಪಡೆದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!